ಜೀವಂತ ಸಾಕು ನಾಯಿಯನ್ನು ಕಸ ವಿಲೇವಾರಿ ವಾಹನಕ್ಕೆ ತುಂಬಿಸಿದ ಮನೆ ಮಾಲಿಕ!!!
Monday, September 9, 2024
Edit
ಮಂಗಳೂರು : ಹಲವಾರು ವರ್ಷ ಸಾಕಿದ ಮನೆಯ ನಾಯಿಯನ್ನೇ ಮನೆ ಮಾಲಿಕರು ಪಾಲಿಕೆಯ ಕಸ ವಿಲೇವಾರಿ ಮಾಡುವ ವಾಹನಕ್ಕೆ ಕೊಟ್ಟ ಘಟನೆ ಮಂಗಳೂರು ನಗರದಲ್ಲಿ ನಡೆದಿದೆ.
ಇಂತಹ ಹೇಯ ಕೃತ್ಯ ಖಂಡಿಸಿದ ಪ್ರಾಣಿ ಪ್ರಿಯರು ಹಾಗೂ ಸಾರ್ವಜನಿಕರು ವ್ಯಾಪಕ ಆಕ್ರೋಶ ವ್ಯಕ್ತಪಡಿಸಿದ್ದು ತಪ್ಪಿತಸ್ತರ ವಿರುದ್ದ ಕಠಿಣ ಕ್ರಮಕ್ಕೆ ಆಗ್ರಹಿಸಿದ್ದಾರೆ.
ನಗರದ ಡೊಂಗರಕೇರಿಯಲ್ಲಿ ಈ ಕೃತ್ಯ ಬೆಳಕಿಗೆ ಬಂದಿದ್ದು ಹಲವಾರು ವರ್ಷಗಳಿಂದ ತನ್ನ ಮನೆಯಲ್ಲಿ ಸಾಕಿದ್ದ ಶ್ವಾನವನ್ನು ಮನೆಯವರು ಬಲವಂತದಿಂದ ಅಮಾನವಿಯವಾಗಿ ನಗರದ ಕಸ ವಿಲೇವಾರಿ ಮಾಡುವ ಪಾಲಿಕೆಯ ಲಾರಿಗೆ ಹಾಕಿ ನಗರದ ಹೊರವಲಯದ ವಾಮಾಂಜೂರು ಡಂಪಿಂಗ್ ಯಾರ್ಡ್ ಬಳಿ ಬಿಡಲಾಗಿದೆ ಎಂದು ತಿಳಿದು ಬಂದಿದೆ. ಶನಿವಾರ ಬೆಳಿಗ್ಗೆ ಈ ಘಟನೆ ನಡೆದಿದ್ದು ಎನ್ನಲಾಗಿದೆ. ಘಟನೆಯ ವಿಡೀಯೋ ಸಿಸಿ ಕ್ಯಾಮರದಲ್ಲಿ ದಾಖಲಾಗಿದೆ. ಜೊತೆಗೆ ಸಾರ್ವಜನಿಕರು ಈ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ. ಈ ಕ್ರೂರ ಘಟನೆಯ ಬಗ್ಗೆ ಪ್ರಾಣಿ ಪ್ರಿಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು. ಪ್ರೀತಿಯಿಂದ ಸಾಕಿದ ನಾಯಿಯನ್ನು ಹೆದರಿಸಿ , ಎಳೆದು ಕೊಂಡು ಹೋಗಲು ಹೇಗಾದರು ಮನಸ್ಸು ಬಂತು.. !!!?? ಎಂದು ಸ್ಥಳಿಯರು ಆಕ್ರೋಶ ಪಟ್ಟಿದ್ದು. ಈ ಅಮಾನುಷ ಕೃತ್ಯ ಮಾಡಿದವರ ಮೇಲೆ ಕ್ರಮಕ್ಕೆ ಆಗ್ರಹಿಸಿದ್ದಾರೆ.
ಅದೇ ರೀತಿ ಪಚ್ಚನಾಡಿ ಪ್ರದೇಶದಲ್ಲಿ ಪ್ರಾಣಿ ದಯಾ ಸಂಘದ ಸದಸ್ಯರು ಹುಡುಕಾಟ ನಡೆಸುತ್ತಿದ್ದು, ಈ ಶ್ವಾನ ಕಂಡರೆ ಮಾಹಿತಿ ನೀಡಲು ಕೋರಲಾಗಿದೆ.